ಅನ್ ಲಾಕ್ 2.0 | ಚಿತ್ರದುರ್ಗ ಸೇರಿದಂತೆ - 6 ಜಿಲ್ಲೆಗಳಿಗೆ ವಿನಾಯಿತಿ ನೀಡಿದ ಸರ್ಕಾರ.

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಈಗಾಗಲೇ 17 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಘೋಷಿಸಿ ಲಾಕ್ ಡೌನ್ ಸಡಿಲಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಜಿಲ್ಲೆಗಳಿಗೆ ವಿನಾಯಿತಿ ನೀಡಿ ಅನ್ ಲಾಕ್ ಅನ್ವಯವಾಗುವಂತೆ ಆದೇಶ ಹೊರಡಿಸಿದೆ.

ಕೊರೊನಾ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ಹೊಸದಾಗಿ ಅನ್ ಲಾಕ್ ಘೋಷಿಸಿದ್ದುಬೆಂಗಳೂರು ಗ್ರಾಮಾಂತರಉಡುಪಿಶಿವಮೊಗ್ಗಬಳ್ಳಾರಿಚಿತ್ರದುರ್ಗವಿಜಯಪುರ ಜಿಲ್ಲೆಗಳಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲೂ ಬಸ್ ಸಂಚಾರಕ್ಕೆ ಅವಕಾಶ ನಿಡಲಾಗಿದ್ದುಬೆಳಿಗ್ಗೆ 6ರಿಂದ ಸಂಜೆ ಗಂಟೆವರೆಗೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಹೋಟೆಲ್ ಗಳಲ್ಲಿ ಕುಳಿತು ತಿನ್ನಲು ಅವಕಾಶ ನೀಡಲಾಗಿದ್ದುಆದರೆ ಬಾರ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಉಳಿದ ಜಿಲ್ಲೆಗಳಂತೆ ಅನ್ವಯವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ