ನವದೆಹಲಿ: ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ , ಕೊರೋನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.
ಪರಿಹಾರದ ಮೊತ್ತವನ್ನು ಸರ್ಕಾರ ನಿರ್ಧರಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಮೊದಲು ವಾದ ಮಂಡಿಸಿದ್ದ ಕೇಂದ್ರ ಸರ್ಕಾರ, ಕೊರೋನಾದಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ನಿಲುವು ತಳೆದಿತ್ತು.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 817 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,98,454 ಮಂದಿಯ ಪ್ರಾಣ ಅಪಹರಿಸಿದೆ
