ಲಿಂಗಾಯತ ಪಂಚಮಸಾಲಿ 2 ಎ.ಮೀಸಲಾತಿ : ಜನವರಿ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ : ಎಸ್.ಎಂ.ಎಲ್.ತಿಪ್ಪೇಸ್ವಾಮಿ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.17): ಲಿಂಗಾಯತ ಪಂಚಮಸಾಲಿಗಳಿಗೆ 2 ಎ.ಮೀಸಲಾತಿ ನೀಡುವುದಾಗಿ ಬರೀ ಆಶ್ವಾಸನೆಯಲ್ಲಿಯೇ ಕಾಲಕಳೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ನಡೆಯನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠ ಜಿಲ್ಲಾ ಘಟಕದ ವತಿಯಿಂದ ಜ.21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಗೌರವಾಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪಂಚಮಸಾಲಿಗಳಿಗೆ 2 ಎ.ಮೀಸಲಾತಿ ನೀಡುವುದಾಗಿ ಆರು ಬಾರಿ ವಚನ ನೀಡಿರುವ ಮುಖ್ಯಮಂತ್ರಿ ಮಾತು ತಪ್ಪಿರುವುದರಿಂದ ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದೊಂದು ದಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಲಾಗುವುದು. ಅದರಂತೆ ಜ.21 ರಂದು ಜಿಲ್ಲೆಯಿಂದ ಇನ್ನೂರು ಮಂದಿ ಧರಣಿಯಲ್ಲಿ ಭಾಗವಹಿಸಲಿದ್ದೇವೆಂದು ಹೇಳಿದರು.

ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಸಿ.ಗಂಗಾಧರಪ್ಪ, ಯುವ ಘಟಕದ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್, ನವೀನ್‍ಕುಮಾರ್ ಎಸ್.ಟಿ. ಕಾರ್ತಿಕ್, ಗಿರೀಶ್ ಎಂ.ಎಸ್. ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ಎಸ್. ಮನು ತಮಟಕಲ್ಲು, ವಿಜಯ್‍ಕುಮಾರ್ ಎಲ್.ಎಂ. ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

The post ಲಿಂಗಾಯತ ಪಂಚಮಸಾಲಿ 2 ಎ.ಮೀಸಲಾತಿ : ಜನವರಿ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ : ಎಸ್.ಎಂ.ಎಲ್.ತಿಪ್ಪೇಸ್ವಾಮಿ first appeared on Kannada News | suddione.



source https://suddione.com/lingayat-panchamasali-2-a-meesalati-dharani-satyagraha-at-freedom-park-bangalore-on-january-21-s-m-l-thippeswamy/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ