ಒಳ ಮೀಸಲಾತಿ ಜಾತಿ ಗಣತಿ : ಮಾದಿಗ ಎಂದು ಬರೆಸಿ : ಜಿ.ಎಸ್.ಮಂಜುನಾಥ್ ಮನವಿ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 08 : ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ.5 ರಿಂದ ಆರಂಭಿಸಿರುವ ಮನೆ ಮನೆ ಸಮೀಕ್ಷೆಯಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಪಾಲ್ಗೊಂಡು ಕಡ್ಡಾಯವಾಗಿ ಮಾದಿಗ ಎಂದು ಬರೆಸುವಂತೆ ಜಾಗೃತಿ ಮೂಡಿಸಿದರು.

 

ನಗರದ ಕೆಳಗೋಟೆಯ ಅಂಬೇಡ್ಕರ್ ಬಡಾವಣೆಯಲ್ಲಿ ಗುರುವಾರ ನಡೆದ ಮನೆ ಮನೆ ಗಣತಿಯಲ್ಲಿ ಭಾಗವಹಿಸಿದ್ದ ಜಿ.ಎಸ್.ಮಂಜುನಾಥ್ ಮಾದಿಗ ಜನಾಂಗ ಯಾವುದೇ ಕಾರಣಕ್ಕೂ ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ನಮೂದಿಸಬಾರದು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಸಮಾಜ ಜಾತಿ ಗಣತಿಯಲ್ಲಿ ಮಾದಿಗ ಎಂದು ನಮೂದಿಸದಿದ್ದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಯಲ್ಲಿನ ಒಳ ಜಾತಿಗಳಿಗೆ ಆಯಾ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಲು ನೆರವಾಗಲಿದೆ ಎಂದರು.

ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಮಹತ್ತರ ತೀರ್ಪಿನಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಿದ್ದು, ಮೇ 17 ರವರೆಗೆ ಜಾತಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನಿಖರವಾದ ಮಾಹಿತಿ ನೀಡಿ ಮಾದಿಗ ಎಂದು ಬರೆಸಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಅವಕಾಶ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.

 

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ