ಪಾಕ್ ಗುಂಡಿನ ದಾಳಿಗೆ ಮತ್ತೊಬ್ಬ ಭಾರತೀಯ ಯೋಧ ಹುತಾತ್ಮ

ಸುದ್ದಿಒನ್ : ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ, ಪಾಕಿಸ್ತಾನಿ ಸೇನೆಯ ಗುಂಡಿನ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಈಗಾಗಲೇ ಹುತಾತ್ಮರಾಗಿದ್ದಾರೆ. ಈಗ ಮತ್ತೊಬ್ಬ ಯುವ ಸೈನಿಕ ಕೂಡ ಪ್ರಾಣ ಕಳೆದುಕೊಂಡಿದ್ದಾನೆ. ಜಮ್ಮುವಿನಲ್ಲಿ ಪಾಕಿಸ್ತಾನದ ಗುಂಡಿನ ದಾಳಿಗೆ ಯೋಧ ಸಚಿನ್ ಯಾದವರಾವ್ ವನಂಜೆ (29) ಹುತಾತ್ಮರಾದರು.

ಸಚಿನ್ ಯಾದವರಾವ್ ವನಂಜೆಯವರ ಊರು ಮಹಾರಾಷ್ಟ್ರ-ತೆಲಂಗಾಣ ಗಡಿಯಲ್ಲಿರುವ ನಾಂದೇಡ್ ಜಿಲ್ಲೆಯ ತಮ್ಲೂರು. ಸಚಿನ್ ಯಾದವ್ ರಾವ್ ವನಂಜೆ ಅವರ ಪಾರ್ಥಿವ ಶರೀರವನ್ನು ಇಂದು ಅವರ ಹುಟ್ಟೂರಿಗೆ ತರುವ ಸಾಧ್ಯತೆಯಿದೆ. ಆತನೊಂದಿಗೆ ಇಬ್ಬರು ನಾಗರಿಕರು ಸಹ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.



source https://suddione.com/another-indian-soldier-martyred-in-pak-firing/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ