ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ : ಕೆ ಅಭಿನಂದನ್

ಹಿರಿಯೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿರುವುದು ಭಾರತೀಯ ಸೈನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಪಹಲ್ಗಾಮ್ ಘಟನೆಯಲ್ಲಿ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ ಉಗ್ರರಿಗೆ ನಮ್ಮ ದೇಶ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ನಾಶಪಡಿಸಿದೆ. ʻಆಪರೇಷನ್‌ ಸಿಂಧೂರʼ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ ಎಂದರು.

ಪಾಕಿಸ್ತಾನ ಇಲ್ಲಿಗೆ ತನ್ನ ಕೆಟ್ಟ ಚಾಳಿಯನ್ನು ಕೈಬಿಟ್ಟರೆ ಒಳ್ಳೆಯದು. ಇಲ್ಲವಾದರೆ ಇದು ಇನ್ನೂ ಆರಂಭ, ಇಡೀ ಜಗತ್ತೇ ತಿರುಗಿ ನೋಡುವಂತೆ ಅಂತ್ಯ ಇನ್ನು ಘೋರವಾಗಿರುತ್ತದೆ. ಪಾಕಿಸ್ತಾನದ ದೇಶದೊಳಗೆ ನುಗ್ಗಿ, ಉಗ್ರರರನ್ನು ಸೆದೆಬಡಿದಿರುವ ಭಾರತೀಯ ಸೈನಿಕರ ಶಕ್ತಿಯನ್ನು ಅನೇಕ ರಾಷ್ಟ್ರಗಳು ಕೊಂಡಾಡುತ್ತಿದ್ದಾರೆ. ಭಯೋತ್ಪಾದಕತೆಯನ್ನು ಮಟ್ಟ ಹಾಕಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ