ಉದ್ಯೋಗ ವಾರ್ತೆ : ವಸತಿ ಶಾಲೆಯಲ್ಲಿ ಖಾಲಿ ಸ್ಥಾನಗಳಿಗೆ ನೇರ ಪ್ರವೇಶ

ಚಿತ್ರದುರ್ಗ.ಜುಲೈ.07: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 9 ಮತ್ತು 10 ನೇ ತರಗತಿಯಲ್ಲಿ ಸ್ಥಾನಗಳಿಗೆ ನೇರ ಪ್ರವೇಶ ನೀಡಲಾಗುತ್ತಿದೆ.

ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.

ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊAದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ