ಚಿತ್ರದುರ್ಗ : ಕನ್ನಡ ಕೌಸ್ತುಭ’ ಮತ್ತು ‘ಸರಸ್ವತಿ ಪ್ರಶಸ್ತಿಗೆ ಸುಮಿತ್ರ ಆಯ್ಕೆ

ಸುದ್ದಿಒನ್,ಚಿತ್ರದುರ್ಗ, ಜುಲೈ. 08 : ತಾಲ್ಲೂಕಿನ ಬಂಗಾರಕ್ಕನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಕು. ಸುಮಿತ್ರ ಎಸ್. ರೆಡ್ಡಿಯವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಕಲಾಕುಂಚ ಸಂಸ್ಥೆಯು ರಾಜ್ಯಮಟ್ಟದ ‘ಕನ್ನಡ ಕೌಸ್ತುಭ’ ಮತ್ತು ‘ಸರಸ್ವತಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಶ್ರೀ ಶ್ರೀನಿವಾಸ ರೆಡ್ಡಿ ಜೆ.ಟಿ. ಮತ್ತು ಶ್ರೀಮತಿ ತಿಪ್ಪಮ್ಮಕೆ ಸಿ. ದಂಪತಿಗಳ ಸುಪುತ್ರಿಯಾಗಿರುವ ಕು.ಸುಮಿತ್ರ ಅವರು ನಾಯಕನಹಟ್ಟಿಯ ವಿದ್ಯಾ ವಿಕಾಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವರ್ಷದ ಎಸ್.ಎಸ್.ಎಲ್.ಸಿ.ಯಲ್ಲಿ ಅವರು ಇಡೀ ವಿಷಯಗಳಲ್ಲಿ ಬಹಳ ಉತ್ತಮ ಅಂಕಗಳನ್ನು ಗಳಿಸಿದ್ದಾರೆ.

ಕನ್ನಡದಲ್ಲಿ ಪೂರ್ಣ ಅಂಕ ಪಡೆದಿರುವುದು, ಭಾಷೆಯ ಮೇಲಿನ ಅವರ ಮೆಚ್ಚುಗೆ ಹಾಗೂ ಶ್ರಮದ ಸಫಲತೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಸುಮಿತ್ರ ಅವರ ಈ ಸಾಧನೆಗೆ ಶಾಲಾ ಮುಖ್ಯಗುರುಗಳು, ಶಿಕ್ಷಕವೃಂದ, ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ. ಇತರ ವಿದ್ಯಾರ್ಥಿಗಳಿಗೆ ಅವರು ಸ್ಪೂರ್ತಿದಾಯಕ ಉದಾಹರಣೆಯಾಗಿದ್ದಾರೆ.

ಕಲಾಕುಂಚ ಸಂಸ್ಥೆಯು 2025ರ ಜುಲೈ 20ರಂದು, ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ, ಹಮ್ಮಿಕೊಂಡಿರುವ ಸಮಾರಂಭದಲ್ಲಿ ಸುಮಿತ್ರ ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ. ಹೆಚ್. ಮಂಜುನಾಥ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ