ನಾಳೆ ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ಬೆಂಗಳೂರು: ಜುಲೈ 9 ಅಂದ್ರೆ ನಾಳೆ ಭಾರತ್ ಬಂದ್ ಮಾಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಮುಷ್ಕರಕ್ಕೆ ಕರೆ ನೀಡಿದೆ. ದೊಡ್ಡ ಕಂಪನಿಗಳಿಗೆ ಅನುಕೂಲಕರ ಮತ್ತು ಕಾರ್ಮಿಕರಿಗೆ ತೊಂದರೆಯಾಗುವ ಸರ್ಕಾರಿ ನೀತಿಗಳನ್ನು ವಿರೋಧಿಸಲು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ಸಂಘಟಿತ ಮತ್ತು ಅಸಂಘಟಿತ ವಲಯಗಳಿಂದ 25 ಕೋಟಿಗೂ ಹೆಚ್ಚು ಕಾರ್ಮಿಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಂಬಂಧಿತ ಮಾರ್ಮಿಕರು ಮತ್ತು ರೈತ ಸಂಘಟನೆಗಳೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರ ನೀತಿಗಳಿಗೆ ತಮಗಮ ವಿರೋಧವನ್ನು ದಾಖಲಿಸಲು ಮುಷ್ಕರಕ್ಕೆ ಕರೆ ನೀಡಿದೆ.

ಹಾಗಾದ್ರೆ ಏನು ಇರಲ್ಲ ಎಂಬುದು ಇಲ್ಲಿದೆ ಮಾಹಿತಿ,

* ಬ್ಯಾಂಕಿಂಗ್ ಮತ್ತು ವಿಮಾ ಸೇವೆಗಳು.

* ಅಂಚೆ ಕಾರ್ಯಾಚರಣೆಗಳು.

* ಕಲ್ಲಿದ್ದಲು ಗಣಿಗಾರಿಕೆ ಮತ್ತು ಕೈಗಾರಿಕಾ ಉತ್ಪಾದನೆ.

* ರಾಜ್ಯ-ಚಾಲಿತ ಸಾರ್ವಜನಿಕ ಸಾರಿಗೆ.

* ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಘಟಕಗಳು.

* ಗ್ರಾಮೀಣ ಪ್ರದೇಶಗಳಲ್ಲಿ ರೈತರ ನೇತೃತ್ವದ ರ್ಯಾಲಿಗಳು.

ಹಾಗಾದ್ರೆ ಏನು ಇರುತ್ತೆ..?

* ಶಾಲೆಗಳು ಮತ್ತು ಕಾಲೇಜುಗಳು ತೆರೆದಿರುತ್ತವೆ.

* ಖಾಸಗಿ ಕಚೇರಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತವೆ.

* ರೈಲ್ವೆ ಇಲಾಖೆಯಿಂದ ಖಚಿತವಾದ ಮುಷ್ಕರವಿಲ್ಲದಿದ್ದರೂ ರೈಲು ವಿಳಂಬಗಳನ್ನು ನಿರೀಕ್ಷಿಸಲಾಗಿದೆ.

 

ಕಾರ್ಮಿಕರ ರಕ್ಷಣೆಗೆ ಹಾನಿ ಮಾಡುವ ಕಾರ್ಮಿಕ ನೀತಿಗಳು, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಹಣದುಬ್ಬರ, ಆರೋಗ್ಯ, ಶಿಕ್ಷಣ ಮತ್ತು ನಾಗರಿಕ ಸೌಲಭ್ಯಗಳಲ್ಲಿ ಕಡಿತ, ಯುವಕರಿಗೆ ಉದ್ಯೋಗ ನೀಡುವ ಬದಲು ಸರ್ಕಾರ ನಿವೃತ್ತರನ್ನು ನೇಮಿಸಿಕೊಳ್ಳುತ್ತಿರುವುದು, 10 ವರ್ಷಗಳಲ್ಲಿ ಕಾರ್ಮಿಕ ಸಮ್ಮೇಳನವಿಲ್ಲ ಎಂದು ಆರೋಪಿಸಿ ಭಾರತ್ ಬಂದ್​​ಗೆ ಕರೆ ನೀಡಲಾಗಿದೆ.



source https://suddione.com/bharat-bandh-tomorrow-what-will-happen-what-wont/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ