
ಸುದ್ದಿಒನ್, ಚಿತ್ರದುರ್ಗ, ಆ. 8 : ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ|| ಪಿ.ಎಸ್. ಶಂಕರ್ ಅವರಿಂದು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ ಐಎಎಸ್(ನಿ.), ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು, ಕಾಲೇಜಿನ ಪ್ರಾಚಾರ್ಯ ಡಾ. ಚಿದಾನಂದಪ್ಪ, ಪದವಿ ವಿಭಾಗದ ಪ್ರಾಚಾರ್ಯ ಡಾ. ಎಸ್.ಹೆಚ್. ಪಂಚಾಕ್ಷರಿ, ಪದವಿ ಹಾಗೂ ಪದವಿಪೂರ್ವ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.


Tags
Chitradurga,
