ಶಾಸಕ ಎನ್ ವೈ ಗೋಪಾಲಕೃಷ್ಣ ವಿರುದ್ಧ ಅವಹೇಳನಕಾರಿ ಪೋಸ್ಟ್ : ಸೌಮ್ಯರೆಡ್ಡಿಯವರಿಗೆ ದೂರು

 

ವರದಿ ಮತ್ತು ಫೋಟೋ ಕೃಪೆ
ಹೆಚ್. ಮಹಾಂತೇಶ್, ರಾಯಾಪುರ.
ಮೊ : 93806 27082

ಸುದ್ದಿಒನ್, ಮೊಳಕಾಲ್ಮುರು, ಆಗಸ್ಟ್, 07 : ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎನ್ ವೈ ಗೋಪಾಲಕೃಷ್ಣ ಅವರ ವಿರುದ್ಧ ವೈಯಕ್ತಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೆ.ಜೆ ಜಯಲಕ್ಷ್ಮಿ ವಿರುದ್ಧ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ ಸೌಮ್ಯರೆಡ್ಡಿಯವರಿಗೆ ದೂರು ನೀಡಿದ್ದಾರೆ.

ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎನ್ ವೈ ಗೋಪಾಲಕೃಷ್ಣ ಸರಳ ಮತ್ತು ಸಜ್ಜನಿಕೆಯ ವ್ಯಕ್ತಿ ಎಂದು ಗುರ್ಥಿಸಿಕೊಂಡಿದ್ದಾರೆ. ಶಾಸಕರ ಆಡಳಿತದ ಬಗ್ಗೆ ರಾಜಕೀಯವಾಗಿ ಪ್ರಶ್ನೆ ಮಾಡಲಿ!ಅದು ಬಿಟ್ಟು ವೈಯಕ್ತಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿರುವುದು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ನೋವು ತಂದಿದೆ,ಹೀಗಾಗಿ ಇವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ಮುಖಂಡರು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಮುಖಂಡರ ಮಾತಿಗೆ ಧ್ವನಿಗೂಡಿಸಿದ ಸೌಮ್ಯ ರೆಡ್ಡಿ ಮಾತನಾಡಿ, ನಮ್ಮ ಪಕ್ಷದ ಹಿರಿಯ ಶಾಸಕ ಎನ್ ವೈ ಗೋಪಾಲಕೃಷ್ಣ ಅವರನ್ನು ನಿಂದಿಸಿರುವುದು ನನಗೂ ಕೂಡ ತುಂಬಾ ನೋವು ತಂದಿದೆ,ಶಾಸಕರ ಹಿರಿತನಕ್ಕೆ ಬೆಲೆ ಕೊಡದೇ, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಜಯಲಕ್ಷ್ಮಿ ಅವರ ವರ್ತನೆಯನ್ನು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ.

ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ ಕೈಗೊಳ್ಳುತ್ತೇನೆ, ಹಿರಿಯ ಶಾಸಕರ ಬಗ್ಗೆ ಹೀಗೆ ಹಗುರವಾಗಿ ಮಾತನಾಡುವುದು ತರವಲ್ಲ, ಕ್ಷೇತ್ರದಲ್ಲಾಗುವ ರಾಜಕೀಯ ಬದಲಾವಣೆಗಳ ಬಗ್ಗೆ ನನಗೆ ಫೋನ್ ಮಾಡಿ ಇಲ್ಲವೇ ಮೆಸೇಜ್ ಮಾಡಿ ಅದು ಬಿಟ್ಟು ಅಷ್ಟು ದೂರದಿಂದ ಮೆಂಟಲ್ ಕೇಸ್ ಬಗ್ಗೆ ದೂರು ನೀಡಲು ಬರುವುದು ಬೇಡ, ಶಾಸಕ ಎನ್ ವೈ ಗೋಪಾಲಕೃಷ್ಣ ಅವರ ಬಗ್ಗೆ ಅವರ ಹಿರಿತನ ಮತ್ತು ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿ ಪ್ರಾಮಾಣಿಕವಾದ ವ್ಯಕ್ತಿ ಎನಿಸಿಕೊಂಡಿದ್ದಾರೆ ಇಂತಹ ಹಿರಿಯ ಶಾಸಕರನ್ನು ಹಗುರವಾಗಿ ಮಾತನಾಡಿರುವುದು ಸರಿಯಲ್ಲ, ಈಗಲೇ ಪಕ್ಷದಿಂದ ಅವರನ್ನು ಉಚ್ಚಟನೆ ಮಾಡುವೆ,ಜಯಲಕ್ಷ್ಮಿ ಅವರಿಗೆ ಸದ್ಯಕ್ಕಿಗ ಯಾವುದೇ ಸ್ಥಾನಮಾನಗಳು ಇಲ್ಲ, ನಾನು ರಾಜ್ಯಾಧ್ಯಕ್ಷರಾಗಿ ಬಂದ ತಕ್ಷಣವೇ ಮಹಿಳಾ ವಿಭಾಗದಲ್ಲಿ ಎರಡು ಹುದ್ದೆಗಳನ್ನು ಹೊರತುಪಡಿಸಿ ಇನ್ನಿರುವ ಎಲ್ಲಾ ಹುದ್ದೆಗಳು ರದ್ದು ಆಗಿವೆ, ಅವರ ಬಗ್ಗೆ ಅಷ್ಟೊಂದು ಪ್ರಾಮುಖ್ಯತೆ ಕೊಡುವುದು ಬೇಡ.

ನಮಗೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಮುಖ್ಯ ನಮ್ಮದೇ ಶಾಸಕರ ಹಿರಿತನಕ್ಕೆ ಧಕ್ಕೆ ತಂದಿರುವ ಇವರನ್ನು ತಕ್ಷಣದಿಂದಲೇ ಪಕ್ಷದಿಂದ ವಜಾ ಗೊಳಿಸುವೆ, ಪಕ್ಷದ ಅಣತಿಯಂತೆ ಪಕ್ಷದ ಸದಸ್ಯತ್ವ ಮತ್ತು ಪಕ್ಷಕ್ಕಾಗಿ ದುಡಿದವರನ್ನು ಪರಿಗಣಿಸಿ ಮಾತ್ರ ಮಹಿಳಾ ವಿಭಾಗದಲ್ಲಿ ಹುದ್ದೆ ನೀಡುತ್ತೇವೆ ಎಂದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ