
ಈ ದಿನದ ಪ್ರಮುಖ 10 ಸುದ್ದಿಗಳು: ಭಾನುವಾರ, 16 ಆಗಸ್ಟ್ 2026
ರಾಜ್ಯ, ರಾಷ್ಟ್ರೀಯ, ವಿದೇಶ ವಿದ್ಯಮಾನಗಳಿಗೆ ಸಂಬಂಧಿಸಿದ ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..
ರಾಜ್ಯ ಬಿಜೆಪಿ ʼಶಸ್ತ್ರಚಿಕಿತ್ಸೆʼಗೆ ವರಿಷ್ಠರ ತಯಾರಿ
ನವದೆಹಲಿ: ನಾಯಕರ ನಡುವೆ ಸಮನ್ವಯದ ಕೊರತೆ, ಭಿನ್ನಮತದ ಬೇಗುದಿಯಿಂದ ನಲುಗಿರುವ ಕರ್ನಾಟಕ ಬಿಜೆಪಿಗೆ ‘ಶಸ್ತ್ರಚಿಕಿತ್ಸೆ’ ನಡೆಸಲು ಪಕ್ಷದ ವರಿಷ್ಠರು ಕೊನೆಗೂ ಮನಸ್ಸು ಮಾಡಿದ್ದಾರೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಪಡಿತರದಾರರ ಇ–ಕೆವೈಸಿ: ಕಾಣದ ಪ್ರಗತಿ
ಬೆಳಗಾವಿ: ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಇ–ಕೆವೈಸಿ ಮಾಡುವ ಪ್ರಕ್ರಿಯೆ ಆರಂಭವಾಗಿ ತಿಂಗಳಾದರೂ ಶೇ 9.73ರಷ್ಟು ಮಾತ್ರ ಪ್ರಗತಿಯಾಗಿದೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಕಾರ್ಯಕ್ರಮಕ್ಕೆ ಸಿಜೆಐಗೆ ಆಹ್ವಾನ: ವಿದ್ಯಾರ್ಥಿಗಳ ಆಕ್ಷೇಪ
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯ (ಎನ್ಎಲ್ಎಸ್ಐಯು) 2026ನೇ ಸಾಲಿನ ಘಟಿಕೋತ್ಸವದ ಅತಿಥಿಯಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ (ಸಿಜೆಐ) ಅವರು ಭಾಗವಹಿಸುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ 42 ಅರ್ಜಿ
ಬೆಳಗಾವಿ: ಹೊಸದಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅನುಮೋದನೆ ಕೋರಿ, ರಾಜ್ಯ ಸರ್ಕಾರಕ್ಕೆ ಒಟ್ಟು 42 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿನ ಸಕ್ಕರೆ ಆಯುಕ್ತರ ಕಚೇರಿಯಲ್ಲಿ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆ ನಡೆದಿದೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
‘ಯುವ–ನವ ಕರ್ನಾಟಕ’: ಡಿ.ಕೆ ಕನಸು
ಬೆಂಗಳೂರು: ಕೃಷಿಯಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಅಳವಡಿಕೆಗೆ ‘ರೈತ ಚೈತನ್ಯ’, ಶಾಲಾ ಮಕ್ಕಳಿಗೆ ‘ಎಐ ಅಕ್ಷರ ಅಭಿಯಾನ’, ಕೌಶಲಾಭಿವೃದ್ಧಿಗಾಗಿ ‘ಕೋಡಿಂಗ್ ಗುರುಕುಲ’ ಮತ್ತು 2047ರ ವೇಳೆಗೆ ₹320 ಲಕ್ಷ ಕೋಟಿ ಆರ್ಥಿಕತೆಯುಳ್ಳ ರಾಜ್ಯವಾಗಿ ಕರ್ನಾಟಕ...
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರಲ್ಲಿ ಬಂಧಿತ ಅಸ್ಫುಲ್ ಉಗ್ರ ಸಂಘಟನೆಗೆ ಹಣ ವರ್ಗಾಯಿಸಿರುವುದು ಪತ್ತೆ
ಬೆಂಗಳೂರು: ದೇಶದ ವಿವಿಧ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದಡಿ ನಗರದಲ್ಲಿ ಬಂಧನಕ್ಕೆ ಒಳಗಾಗಿರುವ ಅಸ್ಫುಲ್ ಮಲ್ಲಿಕ್ (25), ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ಒದಗಿಸಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ: ಆ.20ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಘೋಷಣೆ
ರಾಂಚಿ: ಜಾರ್ಖಂಡ್ನ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ‘ತಿರಂಗಾ ಯಾತ್ರೆ’ ನಡೆಸಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೇನ್ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 20ರಂದು ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಿಸಿದ್ದಾರೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಖರ್ಗೆಗೆ ಸೋನಿಯಾ ಕುರ್ಚಿ ಕೇಳಿದ್ದರು, ವಂದೇ ಮಾತರಂಗೆ ಆಕ್ಷೇಪಿಸಿಲ್ಲ: ಕಾಂಗ್ರೆಸ್
ನವದೆಹಲಿ: ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕಿ ಸೋನಿಯಾ ಗಾಂಧಿಯವರು 'ವಂದೇ ಮಾತರಂ'ನ ಪೂರ್ಣ ಆವೃತ್ತಿಯನ್ನು ಹಾಡಲು ಆಕ್ಷೇಪ ವ್ಯಕ್ತಪಡಿಸಿದ್ಧಾರೆ ಎಂದು ಬಿಜೆಪಿ ಆರೋಪಿಸಿದೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಸೈಬರ್ ವಂಚನೆ: ತನಿಖಾ ಸಂಸ್ಥೆ ಬ್ಯಾಂಕ್ ಖಾತೆ ಸಂಪೂರ್ಣ ಸ್ಥಗಿತಗೊಳಿಸುವಂತಿಲ್ಲ!
ಲಖನೌ: ‘ಸೈಬರ್ ವಂಚನೆ ಪ್ರಕರಣಗಳಲ್ಲಿ, ತನಿಖೆಯ ಭಾಗವಾಗಿ ವ್ಯಕ್ತಿಯ ಬ್ಯಾಂಕ್ ಖಾತೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ತನಿಖಾ ಸಂಸ್ಥೆಗಳಿಗೆ ಅವಕಾಶವಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠವು ತೀರ್ಪು ನೀಡಿದೆ.
ಈ ಸುದ್ದಿ ಪೂರ್ತಿ ಓದಲು ಇಲ್ಲಿ ಕ್ಲಿಕ್ಕಿಸಿ
ಹಾಕಿ: ಕರ್ನಾಟಕಕ್ಕೆ ನಿರಾಯಾಸ ಗೆಲುವು
ಪುಣೆ (ಪಿಟಿಐ): ಕರ್ನಾಟಕ, ಬಿಹಾರ ಮತ್ತು ಮಿಜೋರಾಂ ತಂಡಗಳು ಇಲ್ಲಿ ನಡೆಯುತ್ತಿರುವ 16ನೇ ಹಾಕಿ ಇಂಡಿಯಾ ಜೂನಿಯರ್ ಮಹಿಳಾ ರಾಷ್ಟ್ರೀಯ ಚಾಂಪಿಯನ್ಷಿಪ್ನ ತಮ್ಮ ತಮ್ಮ ಪಂದ್ಯಗಳಲ್ಲಿ ಗೆಲುವು ದಾಖಲಿಸಿದವು.