
ಶ್ರೀನಿವಾಸಪುರದಲ್ಲಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಣೆ
ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜಯಂತ್ಯುತ್ಸವ ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಅರಸು ಅವರ ಜೀವನ ಹಾಗೂ ಸಾಧನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ನಂತರ
ಇಲಾಖೆಯ ಅಭಿವೃದ್ಧಿ ಅಧಿಕಾರಿ ಪ್ರಸನ್ನ, ಶಿಶು ಅಭಿವೃದ್ಧಿ ಇಲಾಖೆಯ ಬೈರೆಡ್ಡಿ, ತಾಲ್ಲೂಕು ಆರೋಗ್ಯಧಿಕಾರಿ ಸರ್ವೋತ್ತಮ್, ಇ.ಸಿ.ಓ ಸುಬ್ರಮಣಿ, ಶಾಲಾ ಮುಖ್ಯ ಶಿಕ್ಷಕ ನಾರಾಯಣಸ್ವಾಮಿ, ಸಿ.ಆರ್.ಪಿ.ರಾಧಾಕೃಷ್ಣ, ತಾಲ್ಲೂಕು ಕಚೇರಿ ಎಫ್.ಡಿ.ಎ. ಎಚ್.ಎಸ್.ಅಭಿಷೇಕ್, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ ಅಭಿಷೇಕ್ ಇದ್ದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260821-18-1889833889