ಉದ್ಯೋಗ ಖಾತ್ರಿ ಕೂಲಿ ಹಣ 15 ದಿನಗಳಲ್ಲಿ ಪಾವತಿಸದಿದ್ದರೆ ಪಿಡಿಒಗಳೇ ಹೊಣೆ: ಸಚಿವ

ಉದ್ಯೋಗ ಖಾತ್ರಿ ಕೂಲಿ ಹಣ 15 ದಿನಗಳಲ್ಲಿ ಪಾವತಿಸದಿದ್ದರೆ ಪಿಡಿಒಗಳೇ ಹೊಣೆ: ಸಚಿವ

ಉದ್ಯೋಗ ಖಾತ್ರಿ ಕೂಲಿ ಹಣ 15 ದಿನಗಳಲ್ಲಿ ಪಾವತಿಸದಿದ್ದರೆ ಪಿಡಿಒಗಳೇ ಹೊಣೆ: ಸಚಿವ

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡಿದವರಿಗೆ 15 ದಿನವಾದರೂ ಕೂಲಿ ಹಣ ಪಾವತಿಯಾಗದಿದ್ದರೆ, ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಹಿರಿಯ ಅಧಿಕಾರಿಗಳು ಹಾಗೂ ಚಾಮರಾಜನಗರ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮೀಣ ಭಾಗದಲ್ಲಿ ಖಾಸಗಿ ಕೆಲಸ ಮಾಡುವ ಕೂಲಿಯಾಳುಗಳಿಗೆ ದೈನಂದಿನ ಆಧಾರದಲ್ಲಿ ಇಲ್ಲವೇ ವಾರಕ್ಕೆ ಒಮ್ಮೆ ಕೂಲಿ ಹಣ ಪಾವತಿ ಆಗುತ್ತದೆ. ಆದರೆ ವಿಬಿಜಿ ರಾಮ ಜಿ ಅಡಿ 15-20 ದಿನವಾದರೂ ಹಣ ಬಾರದಿದ್ದರೆ ಜನ ಕೆಲಸಕ್ಕೆ ಬರುವುದಿಲ್ಲ. ಕನಿಷ್ಠ 7 ಗರಿಷ್ಠ 10 ದಿನಗಳ ಒಳಗೆ ಕೂಲಿ ಹಣ ಪಾವತಿಯಾಗುವಂತೆ ಕ್ರಮ ವಹಿಸಿ ಎಂದು ತಿಳಿಸಿದರು.

ಕಷ್ಟಪಟ್ಟು ಕೂಲಿ ಮಾಡಿದವರಿಗೆ ನಿಗದಿತ ಕಾಲಮಿತಿಯಲ್ಲಿ ಕೂಲಿ ನೀಡದಿರುವುದು ಅಪರಾಧ ಎಂದು ಬಣ್ಣಿಸಿದ ಈಶ್ವರ ಖಂಡ್ರೆ, ಚಾಮರಾಜನಗರ ಜಿಲ್ಲೆಯಲ್ಲಿ ಪಿಡಿಓಗಳ ಲಾಗಿನ್‌ನಲ್ಲಿಯೇ ಇನ್ನೂ ₹57 ಲಕ್ಷ ಕಾಮಗಾರಿಯ ಕೂಲಿ ಬಾಕಿ ಇದೆ. ಕೂಡಲೇ ಈ ಎಲ್ಲ ಕೂಲಿ ಹಣ ಪಾವತಿಗೆ ಕ್ರಮ ಕೈಗೊಳ್ಳಿ ಎಂದು ಸಿಇಓಗೆ ಸೂಚನೆ ನೀಡಿದರು.

ಚಾಮರಾಜನಗರ ತಾಲೂಕು ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡಿದ ಭೂಮಿಯಲ್ಲಿ ಜನರನ್ನು ಕೂರಿಸಿ ಛಾಯಾಚಿತ್ರ ತೆಗೆಸಿ ಬೋಗಸ್ ಮಾನವ ದಿನ ಸೃಜನೆ ಮತ್ತು ನಕಲಿ ಬಿಲ್ ಮಾಡಿರುವ ಬಗ್ಗೆ ತಾವು ಕ್ರಮಕ್ಕೆ ಆದೇಶ ನೀಡಿದ್ದು, ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶ ನೀಡಿದರು.

ಬೋಗಸ್ ಬಿಲ್ ಮತ್ತು ಕಳಪೆ ಕಾಮಗಾರಿಗೆ ಅವಕಾಶ ಇಲ್ಲ. ಇಂತಹ ದೂರುಗಳು ಬಂದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಗಡಿ ಜಿಲ್ಲೆ ಚಾಮರಾಜನಗರದಿಂದ ಯಾರೂ ಉದ್ಯೋಗ ಅರಸಿ ಗುಳೆ ಹೋಗದಂತೆ ಇರುವಲ್ಲಿಯೇ ಉದ್ಯೋಗ ನೀಡಬೇಕು, ಗುಣಮಟ್ಟದ ಶಾಶ್ವತ ಆಸ್ತಿ ನಿರ್ಮಾಣ ಮಾಡಬೇಕು ಎಂದರು.

ಮನ್ರೇಗಾ ಈಗ ವಿಬಿಜಿ ರಾಮ್ ಜಿ ಆಗಿದ್ದು, ಈ ಯೋಜನೆಯಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವಕಾಶವಿದೆ. ಗ್ರಾಮೀಣ ಜನರು ತಮ್ಮ ಗ್ರಾಮದಲ್ಲಿ ಅಭಿವೃದ್ಧಿಗೆ ಒತ್ತಾಯಿಸಬೇಕು. ಯಾವುದೇ ಕಾರಣಕ್ಕೂ ನಕಲಿ ಬಿಲ್ ಮಾಡಲು ಸಹಕಾರ ನೀಡಬಾರದು ಎಂದು ಖಂಡ್ರೆ ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ