ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರಿನಲ್ಲಿ ಲಾಲ್‌ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ

ಬೆಂಗಳೂರು: “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ 'ಗಂಗ ಸಾಮ್ರಾಜ್ಯ ವೈಭವ' ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು.

“ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ ಭೂಮಿ ರಕ್ಷಣಾ ಇಲಾಖೆ ವಶದಲ್ಲೇ ಇರುತ್ತದೆ. ಆದರೆ ಅಲ್ಲಿ ಇಂತಹ ಉದ್ಯಾನ ನಿರ್ಮಿಸಲು ಅನುಮತಿ ಬೇಕು ಎಂದು ಪತ್ರ ಬರೆದಿದ್ದು, ಸಧ್ಯದಲ್ಲೇ ರಕ್ಷಣಾ ಸಚಿವರನ್ನು ಭೇಟಿ ಮಾಡುತ್ತೇನೆ. ವಾರಣಾಸಿಯಲ್ಲಿ ರಕ್ಷಣಾ ಇಲಾಖೆ ಜಾಗದಲ್ಲಿ ಉದ್ಯಾನ ನಿರ್ಮಿಸಲು ಪ್ರಧಾನಮಂತ್ರಿಗಳು ಅನುಮತಿ ನೀಡಿದ್ದಾರೆ. ಇದರ ಜೊತೆಗೆ ಬೆಂಗಳೂರು ನಗರದೊಳಗೆ ಇರುವ ಅರಣ್ಯ ಜಾಗದಲ್ಲಿ ಇಂತಹ ಉದ್ಯಾನವನ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಜಿಬಿಎ, ಬಿಡಿಎ, ತೋಟಗಾರಿಕೆ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಗೆ ಜವಾಬ್ದಾರಿ ವಹಿಸಿ ನಿರ್ಮಿಸಲು ಆಲೋಚಿಸಿದ್ದೇವೆ. ನಮ್ಮ ಕಾಲದಲ್ಲಿ ನಗರದ ಹಸಿರು ಕಾಪಾಡಿ, ಸಾರ್ವಜನಿಕರ ಬದುಕಿಗೆ ಅನುಕೂಲ ಮಾಡಿಕೊಡಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ಲಾಲ್‌ಬಾಗ್ ಕೇವಲ ಉದ್ಯಾನವನ ಮಾತ್ರವಲ್ಲ. ಇದೊಂದು ಇತಿಹಾಸ. ಗಂಗ ಸಾಮ್ರಾಜ್ಯದಲ್ಲಿ ಕೃಷಿಕರು, ರೈತರ ಇತಿಹಾಸವನ್ನು ಇಟ್ಟುಕೊಂಡು ಈ ಫಲಪುಷ್ಟ ಪ್ರದರ್ಶನವನ್ನು ರೂಪಿಸಲಾಗಿದೆ. ಗಂಗರು ಆಗಿನ ಕಾಲದಲ್ಲಿ ಕಟ್ಟಿದ್ದ ಕೆರೆಗಳು ಇಂದಿಗೂ ಉಳಿದಿವೆ. ಕಷ್ಟಕಾಲದಲ್ಲಿ ಆ ಕೆರೆಗಳು ರಕ್ಷಣೆ ಮಾಡಿವೆ. ಗಂಗರ ಇತಿಹಾಸ ಸಮಾನತೆ, ಕೃಷಿಕರ ಬದುಕು, ಹೋರಾಟವನ್ನು ಹೊಂದಿದೆ. ಇದು ನಮ್ಮ ಸಂಸ್ಕೃತಿ, ರೈತರ ಬದುಕು ಹಾಗೂ ಕಲೆಯ ಸಂಭ್ರಮ. ಈ ವರ್ಷದ ಸ್ವಾತಂತ್ರ್ಯ ಸಂಭ್ರಮದಲ್ಲಿ ನಾಡಿನ ಜನತೆ ಈ ಫಲಪುಷ್ಟ ಪ್ರದರ್ಶನ ವೀಕ್ಷಿಸಿ ಆನಂದಿಸಬೇಕು. ಯುವಕರು, ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಈ ಪ್ರದರ್ಶನವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ.10 ದಿನಗಳ ಕಾಲ ಈ ಪ್ರದರ್ಶನ ನಡೆಯಲಿದೆ. ಲಾಲ್‌ ಬಾಗ್‌ ಅನ್ನು ಹೈದರಾಲಿ ಸ್ಥಾಪಿಸಿದರು, ಬ್ರಿಟೀಷರು ಅಭಿವೃದ್ದಿ ಮಾಡಿದರು. ಈಗ ಕರ್ನಾಟಕ ಸರ್ಕಾರ ಮುಂದುವರಿಸುತ್ತಿದೆ” ಎಂದು ತಿಳಿಸಿದರು.

“ಈ ವರ್ಷ ಗಂಗ ಸಾಮ್ರಾಜ್ಯ ರೂಪುಗೊಂಡಿದೆ. ದಕ್ಷಿಣ ಭಾರತದ ಗಂಗರ ಸಾಮ್ರಾಜ್ಯದ ವೈಭವವನ್ನು ಪುಷ್ಪಗಳ ಮೂಲಕ ಮೂಡಿಸಲಾಗಿದೆ. ಅವರ ಹೋರಾಟ, ಸಂಸ್ಕೃತಿ ಎಲ್ಲವೂ ಇಲ್ಲಿ ಅನಾವರಣಗೊಂಡಿದೆ. ಗಂಗರ ಇತಿಹಾಸ ಕರ್ನಾಟಕ ರಾಜ್ಯದ ಇತಿಹಾಸದ ಭಾಗ. ತೋಟಗಾರಿಕಾ ಇಲಾಖೆಯವರು ಈ ಪರಿಕಲ್ಪನೆಯನ್ನು ಅತ್ಯುತ್ತಮವಾಗಿ ರೂಪಿಸಿದ್ದಾರೆ” ಎಂದು ಹೇಳಿದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ