ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿರುವ ಮಧ್ಯೆಯೇ ಮೂರು ಮಸೂದೆಗಳ ಮಂಡನೆ

ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿರುವ ಮಧ್ಯೆಯೇ ಮೂರು ಮಸೂದೆಗಳ ಮಂಡನೆ

ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿರುವ ಮಧ್ಯೆಯೇ ಮೂರು ಮಸೂದೆಗಳ ಮಂಡನೆ

ಬೆಂಗಳೂರು: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ–ಜೆಡಿಎಸ್‌ ಸದಸ್ಯರು ನಿರಂತರ ಧರಣಿ ನಡೆಸುತ್ತಿರುವ ಮಧ್ಯೆಯೇ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದರು.

ಅಪಾರ್ಟ್‌ಮೆಂಟ್‌ನ ಮಾಲೀಕತ್ವ ಮತ್ತು ಅಂತಹ ಅಪಾರ್ಟ್‌ಮೆಂಟ್‌ಗೆ ಕೂಡಿಕೊಂಡ ಸಾಮಾನ್ಯ ಪ್ರದೇಶಗಳು, ಸೌಲಭ್ಯಗಳಲ್ಲಿನ ಅವಿಭಜಿತ ಹಿತಾಸಕ್ತಿ, ಪಾಲನ್ನು ಒದಗಿಸುವ ಹಾಗೂ ಆಡಳಿತ ನಿರ್ವಹಣೆ, ಬಳಕೆಗಾಗಿ ಕಾರ್ಯವ್ಯವಸ್ಥೆ ರೂಪಿಸಲು ‘ಕರ್ನಾಟಕ ಅಪಾರ್ಟ್‌ಮೆಂಟ್‌ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ’ ಸಿದ್ಧಪಡಿಸಲಾಗಿದೆ.

ನಗರ ಪ್ರದೇಶಗಳ ಯಾವುದೇ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆಯಾಗಿ ಘೋಷಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ ನೀಡಲು ‘ಕರ್ನಾಟಕ ಮುನ್ಸಿಪಾಲಿಟಿಗಳ ಮಸೂದೆ’ ಹಾಗೂ ಕರ್ನಾಟಕ ನಗರ ಪಾಲಿಕೆಗಳ ಮಸೂದೆಗಳಿಗೆ ತಿದ್ದುಪಡಿ ತರಲಾಗಿದೆ.  

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ