
ಕಡೂರು ಬಳಿ ಬೈಕ್ಗಳ ಡಿಕ್ಕಿ: ಹಿಂಬದಿ ಸವಾರ ಬಾಲಾಜಿನಾಯ್ಕ ಸಾವು
ಕಡೂರು: ಬೀರೂರು ಪಟ್ಟಣದ ತರಳಬಾಳು ಕಲ್ಯಾಣ ಮಂಟಪದ ಮುಂಭಾಗ ಸೋಮವಾರ ಬೆಳಿಗ್ಗೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದ ಹಿಂಬದಿ ಸವಾರ ಕಡೂರು ತಾಲ್ಲೂಕಿನ ಎಂ.ಕೋಡಿಹಳ್ಳಿ ಗ್ರಾಮದ ಬಾಲಾಜಿನಾಯ್ಕ (58) ಮೃತಪಟ್ಟಿದ್ದಾರೆ.
ಬಾಲಾಜಿನಾಯ್ಕ ಅವರು ಸ್ವಗ್ರಾಮದ ಪ್ರಕಾಶನಾಯ್ಕ ಅವರೊಂದಿಗೆ ಬೈಕ್ನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದಾಗ, ಅತಿವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
ಮೃತರ ಪುತ್ರ ನೀಡಿದ ದೂರಿನ ಮೇರೆಗೆ ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260819-126-1771480279