ತುಮಕೂರು: ಚಾಕುವಿನಿಂದ ಇರಿದು ಯುವಕನ ಕೊಲೆ
ತುಮಕೂರು: ನಗರದ ಹೆಗಡೆ ಕಾಲೊನಿಯಲ್ಲಿ ಬುಧವಾರ ಬೆಳಗಿನ ಜಾವ ಚಾಕುವಿನಿಂದ ಚುಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ.
ಜಯಪುರದ ಸೈಯದ್ ಸುಹೇಲ್ (21) ಕೊಲೆಯಾದ ಯುವಕ. ಹೆಗಡೆ ಕಾಲೊನಿಯ ರಬ್ಬಾನ್ (25) ಆರೋಪಿ.
ಬೆಳಗಿನ ಜಾವ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಹೇಲ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಘಟನೆ ನಂತರ ರಬ್ಬಾನ್ ತಲೆಮರೆಸಿಕೊಂಡಿದ್ದಾನೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.