ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಕನ್ನಡ ಸಂಘಟನೆಗಳ ಮುಖಂಡರಿಂದ ಸಿಎಂಗೆ ಮನವಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಕನ್ನಡ ಸಂಘಟನೆಗಳ ಮುಖಂಡರಿಂದ ಸಿಎಂಗೆ ಮನವಿ

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ಕನ್ನಡ ಸಂಘಟನೆಗಳ ಮುಖಂಡರಿಂದ ಸಿಎಂಗೆ ಮನವಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

'ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ನಿರ್ಧಾರ ಕೈಗೊಳ್ಳಬೇಕು. ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕು' ಎಂದು ಒತ್ತಾಯಿಸಿದರು.

ಅಖಿಲ ಕರ್ನಾಟಕ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, 'ಸರ್ಕಾರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದೆ. ಮಾತಿಗೆ ತಪ್ಪಿದರೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ' ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಚ್. ಶಿವರಾಮೇಗೌಡ, ಕನ್ನಡ ಪರ ಹೋರಾಟಗಾರ ಫಾಲನೇತ್ರ ಸಿ ಕೆ ರಾಮೇಗೌಡ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ , ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಕನ್ನಡ ಕುಮಾರ್, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಶಂಕರ್ ಮತ್ತು ಸಮರಸೇನೆಯ ಅಧ್ಯಕ್ಷ ಜಗದೀಶ್ ಗೌಡ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ