
ಹನೂರು ಗುಂಡೇಟು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಒಪ್ಪದ ಸಂಬಂಧಿಕರು
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ ಗುಂಡೇಟಿನಿಂದ ಮೃತಪಟ್ಟ ಮೂವರ ಮರಣೋತ್ತರ ಪರೀಕ್ಷೆಗೆ ಅವರ ಕುಟುಂಬಸ್ಥರು ಅಡ್ಡಿಪಡಿಸಿದ್ದು, ಶವಗಳು ಇಲ್ಲಿನ ಕೆ.ಆರ್. ಆಸ್ಪತ್ರೆಯ ಶವಾಗಾರದಲ್ಲೇ ಉಳಿದಿವೆ.
ಶನಿವಾರವೇ ಮೃತದೇಹಗಳನ್ನು ಕೆ.ಆರ್. ಆಸ್ಪತ್ರೆಗೆ ತರಲಾಗಿತ್ತು. ಭಾನುವಾರ ಬೆಳಿಗ್ಗೆ ಶವಗಳನ್ನು ಸ್ಲ್ಯಾನಿಂಗ್ ಗಾಗಿ ಕೊಂಡೊಯ್ಯಲು ಆಸ್ಪತ್ರೆಯ ಸಿಬ್ಬಂದಿ ಮುಂದಾದರು. ಆದರೆ ಇದಕ್ಕೆ ಒಪ್ಪದ ಮೃತರ ಕುಟುಂಬಸ್ಥರು ಆಸ್ಪತ್ರೆಗೆ ಮುಖ್ಯಮಂತ್ರಿ ಹಾಗೂ ಸಚಿವರು ಬರುವವರೆಗೂ ಮರಣೋತ್ತರ ಪರೀಕ್ಷೆ ನಡೆಯಬಾರದು ಎಂದು ತಡೆಯೊಡ್ಡಿದರು. ಹೀಗಾಗಿ ಶವಗಳನ್ನು ಮತ್ತೆ ಶವಾಗಾರಕ್ಕೆ ಒಯ್ಯಲಾಯಿತು.