
ಸ್ವಾತಂತ್ರ್ಯ ದಿನ: ಚಾಮರಾಜನಗರದಲ್ಲಿ ಸಚಿವ ಪುಟ್ಟರಂಗಶೆಟ್ಟಿ ಧ್ವಜಾರೋಹಣ
ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗದಲ್ಲಿ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೇಷ್ಮೆ ಹಾಗೂ ಪಶು ಸಂಗೋಪನಾ ಇಲಾಖೆ ಸಚಿವ ಸಿ.ಪುಟ್ಟರಂಗಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಗೌರವ ವಂದನೆ ಸ್ವೀಕರಿಸಿದ ಸಚಿವರು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಪೊಲೀಸ್, ಸ್ಕೌಟ್ಸ್ ಅಂಡ್ ಗೈಡ್ಸ್, ಜಿಲ್ಲಾ ಸಶಸ್ತ್ರ ಪಡೆ, ಶಾಲಾ ಕಾಲೇಜು ವಿದ್ಯಾರ್ಥಿಗಳ ಪಥ ಸಂಚಲನ ಗಮನ ಸೆಳೆಯಿತು.
ಸಮಾರಂಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಬಿಂಬಿಸುವ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾತಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.