ನಾಗೇಂದ್ರ ರಾಜೀನಾಮೆಗೆ ಪಟ್ಟು: ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
‘ನಾಗೇಂದ್ರ ಅವರ ರಾಜೀನಾಮೆ ಪಡೆಯದೆ ವಿರೋಧ ಪಕ್ಷಗಳನ್ನೇ ಟೀಕಿಸುವ ಮುಖ್ಯಮಂತ್ರಿಯೇ ಗೂಂಡಾ ಸಂಸ್ಕೃತಿ ಉಳ್ಳವರು. ದಲಿತ ಸಮುದಾಯದ ಪರವಾಗಿ ಹಾಗೂ ಧ್ವನಿ ಇಲ್ಲದವರ ಧ್ವನಿಯಾಗಿ ಬಿಜೆಪಿ, ಜೆಡಿಎಸ್ ಹೋರಾಟ ನಡೆಸುತ್ತಿವೆ. ಇಂತಹ ಸಂದರ್ಭದಲ್ಲಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟ ನಿಲ್ಲದು’ ಎಂದು ವಿಜಯೇಂದ್ರ ಎಚ್ಚರಿಸಿದರು.
ಮುತ್ತಿಗೆ ಹಾಕುವುದನ್ನು ಪೊಲೀಸರು ನಿರ್ಬಂಧಿಸಬಹುದೆಂಬ ಮುಂದಾಲೋಚನೆಯಿಂದ ಪ್ರತಿಭಟನೆ ರೂಪಿಸಿದ್ದ ಬಿಜೆಪಿ ನಾಯಕರು, ವಿಧಾನಸೌಧದ ನಾಲ್ಕು ಗೇಟ್ಗಳಿಂದಲೂ ಪ್ರವೇಶಿಸುವ ಯೋಜನೆ ರೂಪಿಸಿದ್ದರು. ಆದರೆ, ಎಲ್ಲೆಡೆಯೂ ಪೊಲೀಸರು ತಡೆದರು. ಪ್ರತಿಭಟನೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪಾಲ್ಗೊಂಡಿದ್ದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಪಾಲ್ಗೊಂಡಿದ್ದರು.
ದಲಿತ ಸಮುದಾಯಕ್ಕೆ ಸೇರಿದ ಹಣ ನುಂಗಿದ ಸರ್ಕಾರ ಇದು. ಆರೋಪಿಯನ್ನೇ ಸಚಿವರನ್ನಾಗಿ ಮಾಡಿದ್ದು ಸರಿಯಲ್ಲ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260825-51-748029726