ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಾಡಾನೆ ದಾಳಿ; ವಾಚರ್ ಸಾವು

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಾಡಾನೆ ದಾಳಿ; ವಾಚರ್ ಸಾವು

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಾಡಾನೆ ದಾಳಿ; ವಾಚರ್ ಸಾವು

ಹನೂರು (ಚಾಮರಾಜನಗರ ಜಿಲ್ಲೆ); ಮಲೆ ಮಹದೇಶ್ವರ ವನ್ಯಧಾಮದಲ್ಲಿ ಶನಿವಾರ ರಾತ್ರಿ ಕಾಡಾನೆ ದಾಳಿಗೆ ಇಲಾಖೆಯ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಮಹದೇವಸ್ವಾಮಿ(45) ಮೃತರು.

ಮಹದೇಶ್ವರ ಬೆಟ್ಟ ಉಪ ವಿಭಾಗದ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ಶ್ರೀಗಂಧದ ಮರಗಳ ಕಡಿತಲೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಶನಿವಾರ ರಾತ್ರಿ ಆರೋಪಿಗಳ ಪತ್ತೆಗೆ ಸಿಬ್ಬಂದಿ ಗಸ್ತು ನಡೆಸುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು ಮಹದೇವಸ್ವಾಮಿ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಸಾಗಿಸಲಾಗಿದೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ