
ಗದಗ: ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಖಂಡಿಸಿ ಪ್ರತಿಭಟನೆ
ಗದಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಶುದ್ಧೀಕರಣ ಮಾಡಿ, ಅಪಮಾನ ಮಾಡಿದ್ದನ್ನು ಖಂಡಿಸಿ ಗದಗ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಂಗಳವಾರ ಪತ್ರಿಭಟನೆ ನಡೆಯಿತು.
ಇಂತಹ ಅಮಾನವೀಯ ಘಟನೆಯನ್ನು ಖಂಡಿಸಿ, ರಾಷ್ಟ್ರಪತಿ ಅವರು ಮಧ್ಯಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಲಾಯಿತು.
ಮೊದಲಿನಿಂದಲೂ ದಲಿತರಿಗೆ ಇಂತಹ ಅಪಮಾನ ಮಾಡಲಾಗುತ್ತಿದೆ. ಮನುವಾದಿಗಳು ದಲಿತರನ್ನು ಕೀಳಾಗಿ ಕಾಣುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಇನ್ನಾದರೂ ಕ್ರಮ ವಹಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಕ್ರಾಂತಿ ಗೀತೆ ಮೂಲಕ ಪ್ರತಿಭಟನೆಗೆ ಚಾಲನೆ ನಿಡಲಾಯಿತು.