
Karnataka Rains | ಮಡಿಕೇರಿಯಲ್ಲಿ ಭಾರಿ ಮಳೆ: ತಡೆಗೋಡೆ ಕುಸಿತ
ಮಡಿಕೇರಿ: ನಗರದಲ್ಲಿ ಶುಕ್ರವಾರ ರಾತ್ರಿಯಿಂದಲೂ ಒಂದೇ ಸಮನೆ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದಲ್ಲಿ ರಾಜಕಾಲುವೆಗಳು ಉಕ್ಕಿ ಹರಿಯುತ್ತಿವೆ.
ಇಲ್ಲಿನ ಮುಳಿಯ ಬಡಾವಣೆ ಸಮೀಪದ ಸ್ಫಟಿಕ ಬಡಾವಣೆಯಲ್ಲಿ ರಸ್ತೆಗೆ ರಾಜಕಾಲುವೆ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ನಿರ್ಮಾಣ ಹಂತದ ಮನೆಯೊಂದರ ತಡೆಗೋಡೆ ಕುಸಿದು ಬಿದ್ದಿದೆ.
ಮಡಿಕೇರಿ ತಾಲ್ಲೂಕಿನ 2ನೇ ಮೊಣ್ಣಂಗೇರಿ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಮಣ್ಣು ಕುಸಿದಿದ್ದು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.