ದಾವಣಗೆರೆಯಲ್ಲಿ ಗುಂಪುಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

ದಾವಣಗೆರೆಯಲ್ಲಿ ಗುಂಪುಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

ದಾವಣಗೆರೆಯಲ್ಲಿ ಗುಂಪುಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

ದಾವಣಗೆರೆ: ಇಲ್ಲಿನ ಬಿ.ಡಿ. ಲೇಔಟ್‌ನಲ್ಲಿ ಎರಡು ಗುಂಪುಗಳ ನಡುವೆ ಭಾನುವಾರ ರಾತ್ರಿ ನಡೆದ ಮಾರಾಮಾರಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ನಿವಾಸಿಗಳಾದ ಮೈನುದ್ದೀನ್, ಜುನೇದ್ ಹಾಗೂ ಇರ್ಫಾನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಗಳನ್ನು ಆಜಾದ್‌ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮೈನುದ್ದೀನ್ ಹಾಗೂ ಸ್ನೇಹಿತರು ರಸ್ತೆ ಬದಿಯಲ್ಲಿದ್ದಾಗ ಮೊಹಮ್ಮದ್ ದಾ ಗುಂಪಿನ ಹತ್ತಾರು ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ದೊಣ್ಣೆ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗುಂಪು ಮಾರಾಮಾರಿ ಕಂಡ ಜನರು ಭಯಭೀತರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಮಾರಾಮಾರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ