
ಚಾಮರಾಜನಗರ: ಹುಲಿ ದಾಳಿಗೆ ರೈತ ಬಲಿ
ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ಬಸವಣ್ಣ (65) ಎಂಬುವರು ಮೃತಪಟ್ಟಿದ್ದಾರೆ.
ಸೋಮವಾರ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಹುಲಿ ದಾಳಿ ನಡೆಸಿದ್ದು ಕೊಂದು ಹಾಕಿದೆ. ಅರ್ಧ ದೇಹವನ್ನು ತಿಂದಿದ್ದು, ಉಳಿದರ್ಧ ದೇಹವನ್ನು ಸಮೀಪದ ಕಬ್ಬಿನ ತೋಟಕ್ಕೆ ಎಳೆದೊಯ್ದಿದೆ.
ರಾತ್ರಿಯಾದರೂ ಬಸವಣ್ಣ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಜಮೀನಿಗೆ ತೆರಳಿ ನೋಡಿದಾಗ ಹುಲಿ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.
ಹುಲಿ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಜಮಾಯಿಸಿ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡುವವರೆಗೆ ಶವ ಎತ್ತಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಬಿಆರ್ಟಿ ಹುಲಿ ಸಂರಕ್ಷಿತ ಅರಣ್ಯದ ಡಿಸಿಎಫ್ ಶ್ರೀಪತಿ, ತಹಶೀಲ್ದಾರ್ ಗಿರಿಜಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.