ಗದಗ ತಾಲ್ಲೂಕಿಗೆ ಅನ್ಯಾಯ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರೋಪ

ಗದಗ ತಾಲ್ಲೂಕಿಗೆ ಅನ್ಯಾಯ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರೋಪ

ಗದಗ ತಾಲ್ಲೂಕಿಗೆ ಅನ್ಯಾಯ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರೋಪ

ಗದಗ: ‘ಗದುಗಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದ್ದರೂ ಗದಗ ತಾಲ್ಲೂಕನ್ನು ಬರಪೀಡಿತವೆಂದು ಘೋಷಿಸದಿರುವುದು ರೈತರಿಗೆ ಮಾಡಿದ ಅನ್ಯಾಯ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಆರೋಪಿಸಿದ್ದಾರೆ.

‘ತಾಲ್ಲೂಕಿನಲ್ಲಿ ಶೇ 60ರಷ್ಟು ಮಳೆ ಕೊರತೆ ಇದೆ ಎಂಬುದಾಗಿ ಜಿಲ್ಲಾಡಳಿತ ವರದಿ ನೀಡಿದೆ. ಆದರೂ ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಯಾವ ಆಧಾರದಲ್ಲಿ ಈ ಪಟ್ಟಿ ತಯಾರಿಸಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದಿದ್ದಾರೆ.

‘ಗದಗ ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ, ರಾಜ್ಯ ಸರ್ಕಾರವು ರೈತರ ಬಾಳಿನೊಂದಿಗೆ ಚೆಲ್ಲಾಟ ಆಡುತ್ತಿರುವುದು ಖಂಡನೀಯ. ಈ ಸಂಕಷ್ಟದ ಸಮಯದಲ್ಲಿ ರೈತರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ