
IAS Posting: ಐಎಎಸ್, ಐಎಫ್ಎಸ್ ಅಧಿಕಾರಿಗೆ ಹೆಚ್ಚುವರಿ ಹುದ್ದೆ ನೀಡಿದ ಸರ್ಕಾರ
ಬೆಂಗಳೂರು: ಕರ್ನಾಟಕ ಸರ್ಕಾರವು ಐಎಎಸ್ ಹಾಗೂ ಐಎಫ್ಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹುದ್ದೆ ನೀಡಿದೆ.
ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಎಸ್.ಎಸ್.ಲಿಂಗರಾಜ ಅವರಿಗೆ ಪಶು ವೈದ್ಯಕೀಯ ಸೇವೆಗಳ ಇಲಾಖೆಯ ಜತೆಗೆ ರೇಷ್ಮೆ ಇಲಾಖೆ ಅಭಿವೃದ್ದಿ ಆಯುಕ್ತ ಹಾಗೂ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನಾ ಅಭಿವೃದ್ದಿ ಸಂಸ್ಥೆ ನಿರ್ದೇಶಕರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ( ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಎನ್.ಶಿವಶಂಕರ ಅವರಿಗೆ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ.ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯನ್ನೂ ನೀಡಲಾಗಿದೆ.